ಚಿತ್ರ

೧೯೮೩ ರಲ್ಲಿ ಬಿಡುಗಡೆಯಾದ ರಾಜ್‌ಕುಮಾರ್ ನಟಿಸಿರುವ ಚಿತ್ರ ಸಮಯದ ಗೊಂಬೆ, ಅದರಲ್ಲಿ ಅನಿಲ್ ಆಲಿಯಾಸ್ ಗುರುಮೂರ್ತಿಯಾಗಿ ನಟಿಸಿರುವ ರಾಜ್‌ಕುಮಾರ್ ಒಬ್ಬ ಸಾಮಾನ್ಯ ಲಾರಿ ಡ್ರೈವರ್. ಆತನ ಸಾಕು ತಂದೆ ಶಕ್ತಿ ಪ್ರಸಾದ್ ಚೀಟಿ ಹಣವೆಂದು ತೂಗುದೀಪ ಶ್ರೀನಿವಾಸ್ ಹತ್ತಿರ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಹಣವನ್ನು ಕೇಳೋದಕ್ಕೆ ಹೋದಾಗ ’ಮದುವೆ ದಿನ ಬಾ ಆ ದಿನವೇ ಕೊಡುತ್ತೇನೆ’ ಎಂದು ಸುಳ್ಳು ಹೇಳಿ ರಾಜ್‌ಕುಮಾರ್ ಮೇಲೆ ಹಳೆಯ ಹಗೆಯ ಸೇಡು ತೀರಿಸಿಕೊಳ್ಳುವ ಹವಣಿಕೆ ತೂಗುದೀಪ ಶ್ರೀನಿವಾಸ್‌ದು. ಇನ್ನೇನು ರಾಜ್‌ಕುಮಾರ್ ತಂಗಿಯ ಮದುವೆ ನಡೆಯುತ್ತಿದೆ, ಅಂತಹ ಒಳ್ಳೆಯ ಸಮಯದಲ್ಲಿ ಈ ಹಿಂದೆ ಯೋಚಿಸಿಟ್ಟುಕೊಂಡಂತೆ ತೂಗುದೀಪ ಶ್ರೀನಿವಾಸ್ ’ಯಾವ ಹಣ, ಅದನ್ನು ಕೊಟ್ಟಿದ್ದಕ್ಕೆ ಏನು ಸಾಕ್ಷಿ-ಆಧಾರವಿದೆ, ಕೊಡೋದಿಲ್ಲ...’ವೆಂದು ಗರ್ಜಿಸಿದ್ದನ್ನು ಕಂಡು ದೀನನಾಗಿ ಬೇಡಿಕೊಂಡು ಫಲ ಸಿಗದೇ ಶಕ್ತಿಪ್ರಸಾದ್ ಪೆಚ್ಚು ಮೋರೆ ಹಾಕಿಕೊಂಡು ಮದುವೆ ಮಂಟಪಕ್ಕೆ ಖಾಲೀ ಕೈ ಇಟ್ಟುಕೊಂಡು ಹಿಂತಿರುಗುತ್ತಾನೆ. ಮದುವೆಯ ಮಾತಿನ ಪ್ರಕಾರ ಸ್ಕೂಟರ್ ಖರೀದಿ ಹಣವೆಂದು ಹತ್ತು ಸಾವಿರ ರೂಪಾಯಿ ಹಣಕೊಡದಿದ್ದರೆ ಮದುವೆಯನ್ನೇ ನಿಲ್ಲಿಸುವುದಾಗಿ ಗಂಡಿನ ಕಡೆಯವರು ಪಟ್ಟು ಹಿಡಿದು ನಿಂತಾಗ, ತಂಗಿಯ ಮದುವೆಯ ಖರ್ಚಿಗೆಂದು ತಾನು ಓಡಿಸುತ್ತಿದ್ದ ಲಾರಿಯನ್ನು ಮಾರಿದ್ದ ರಾಜ್‌ಕುಮಾರ್‌ಗೆ ತೂಗುದೀಪ ಶ್ರೀನಿವಾಸ್ ಹತ್ತಿರ ಹೋಗಿ ನ್ಯಾಯಾನ್ಯಾಯ ಕೇಳದೇ ಬೇರೆ ನಿರ್ವಾಹವೇ ಇರೋದಿಲ್ಲ. ಒಂದು ಕಡೆ ಮಹೂರ್ತ ಬೇರೆ ಮೀರಿ ಹೋಗುತ್ತಿದೆ, ಮತ್ತೊಂದು ಕಡೆ ಮದುವೆ ನಿಂತು ಹೋದರೆ ಅಗಾಧವಾದ ಅವಮಾನ ಬೇರೆ.

ಹೀಗಿರುವಾಗ ರಾಜ್‌ಕುಮಾರ್ ತೂಗುದೀಪ ಶ್ರೀನಿವಾಸ್ ಹತ್ತಿರ ಬಂದು ಕೇಳಿದಾಗ ಮತ್ತೆ ಅದೇ ಮಾತು, ’ಯಾವ ಹಣ, ಕೊಟ್ಟಿದ್ದಕ್ಕೆ ಏನು ಆಧಾರವಿದೆ, ಕೊಡೋದಿಲ್ಲ, ಅದೇನು ಮಾಡ್ತೀಯೋ ಮಾಡಿಕೋ’...ಹೀಗಿರುವಾಗ ದುಷ್ಟರ ಗುಂಪಿಗೂ ರಾಜ್‌ಗೂ ಮಾರಾಮಾರಿ ನಡೆದು ಕೊನೆಗೆ ಬಲವಂತವಾಗಿ ತೂಗುದೀಪ ಶ್ರೀನಿವಾಸ್ ಹತ್ತಿರದಿಂದ ಹತ್ತು ಸಾವಿರ ರೂಪಾಯಿ ತಂದು ತಂಗಿಯ ಮದುವೆಯನ್ನು ರಾಜ್ ಪೂರೈಸುವ ಸಂದರ್ಭ ಬರುತ್ತದೆ. ಇನ್ನೇನು ಮದುವೆ ಮುಗಿಯಿತು ಎಂದ ಕೂಡಲೇ ತೂಗುದೀಪ ಶ್ರೀನಿವಾಸ್ ಪೋಲೀಸರೊಡನೆ ಬಂದು ರಾಜ್ ತನ್ನನ್ನು ಹೊಡೆದು ಬಡಿದು ದೋಚಿರುವುದಾಗಿ ಪಿರ್ಯಾದನ್ನು ಕೊಟ್ಟ ಕಾರಣ, ಪೋಲೀಸರು ರಾಜ್‌ ಅನ್ನು ಅರೆಷ್ಟ್ ಮಾಡಿ ಕರೆದುಕೊಂಡು ಹೋಗುತ್ತಾರೆ. ಸಂತಸದಿಂದ ಕೊನೆಯಾಗ ಬೇಕಾಗಿದ್ದ ಮದುವೆ ಮನೆ ದುಃಖದ ಕಡಲಲ್ಲಿ ಮುಳುಗುತ್ತದೆ. ಕೆಲ ದಿನಗಳ ನಂತರ ಕೋರ್ಟಿನಲ್ಲಿ ರಾಜ್‌ದೇ ತಪ್ಪಿದೆಯೆಂದು ಸಾಬೀತಾಗಿ ಒಂದು ವರ್ಷಗಳ ಕಠಿಣ ಸಜೆಯನ್ನು ವಿಧಿಸಿ ರಾಜ್‌ಗೆ ಜೈಲಿಗೆ ತಳ್ಳಲಾಗುತ್ತದೆ.

Comments

Popular posts from this blog

ದುರ್ಗದ ಮಳೆ

ಅಮಾಸೆ